25/10/2019
ಕೆ.ಆರ್.ಪೇಟೆ ಪಟ್ಟಣದಲ್ಲಿ ಎಂಜಿನಿಯರಿಂಗ್, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಥಿಗಳಿಗೆ ಲೋಕೇಶ್ ಬುಕ್ ಹೌಸ್ ವತಿಯಿಂದ 3 ಲಕ್ಷ ರೂ ಮೌಲ್ಯದ 2ಸಾವಿರಕ್ಕೂ ಹೆಚ್ಚು ಪುಸ್ತಕಗಳ ಉಚಿತ ವಿತರಣೆ...
ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ವಿತರಣೆ ಮಾಡಿರುವ ನಾರಾಯಣಗೌಡ ಬುಕ್ ಹೌಸ್ ಮಾಲೀಕ ಪುರಸಭೆ ಸದಸ್ಯ ಹೆಚ್.ಆರ್.ಲೋಕೇಶ್ ಅವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರು...
ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಅನುಕೂಲವಾಗುವಂತೆ ಲಕ್ಷಾಂತರ ರೂಪಾಯಿಗಳ ಮೌಲ್ಯದ ವಿಜ್ಞಾನ ಮತ್ತು ತಂತ್ರಜ್ಞಾನದ ಮಾಹಿತಿಯ ಪುಸ್ತಕಗಳನ್ನು ಉಚಿತವಾಗಿ ನೀಡುತ್ತಿರುವ ಲೋಕೇಶ್ ಮತ್ತು ಸಹೋದರ ಸೋಮಣ್ಣ ಅವರ ಸಮಾಜಮುಖಿ ಕಾಳಜಿಯು ಎಲ್ಲರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದ ನಾರಾಯಣಗೌಡ ವಿದ್ಯಾರ್ಥಿಗಳು ಮೊಬೈಲ್ ಸಂಸ್ಕೃತಿಯಿಂದ ಹೊರಬಂದು ಪುಸ್ತಕಗಳನ್ನು ಓದುವ, ಪುಸ್ತಕಗಳನ್ನು ಆತ್ಮೀಯ ಗೆಳೆಯರನ್ನಾಗಿ ಮಾಡಿಕೊಳ್ಳುವ ಕಳಕಳಿ ಹಾಗೂ ಬದ್ಧತೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಸರ್ವ ಶ್ರೇಷ್ಠ ಸಾಧನೆ ಮಾಡಬೇಕು. ಮುಂದಿನ ದಿನಗಳಲ್ಲಿ ಲೋಕೇಶ್ ತಮ್ಮ ತಂದೆತಾಯಿಗಳ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸಿ ಇನ್ನೂ ಹೆಚ್ಚಿನ ಸಮಾಜಸೇವೆಯನ್ನು ಮಾಡಲಿ ಎಂದು ಶುಭ ಹಾರೈಸಿದರು.. ಈ ಸಂದರ್ಭದಲ್ಲಿ ಮುಖಂಡರಾದ ಕರ್ತೇನಹಳ್ಳಿ ಸುರೇಶ್, ಅಗ್ರಹಾರಬಾಚಹಳ್ಳಿ ಜಗಧೀಶ್, ಶಿವಕುಮಾರ್, ನಾರಾಯಣಗೌಡ ಅಭಿಮಾನಿಗಳ ಬಳಗದ ಅಧ್ಯಕ್ಷ ಚಂದ್ರಮೋಹನ್, ಸಂತೋಷ್, ದಯಾನಂದ ಮತ್ತಿತರರು ಉಪಸ್ಥಿತರಿದ್ದರು...ಉಚಿತ ಎಂಜಿನಿಯರಿಂಗ್ ಪುಸ್ತಕಗಳ ವಿತರಣಾ ಸಮಾರಂಭದಲ್ಲಿ ನೂರಾರು ವಿದ್ಯಾರ್ಥಿಗಳು ಬಂದು ತಮ್ಮ ಶೈಕ್ಷಣಿಕ ವಿಕಾಸಕ್ಕೆ ಬೇಕಾದ ಪುಸ್ತಕಗಳು ಆಯ್ಕೆಮಾಡಿಕೊಂಡರು...